ಬೆಂಗಳೂರು:(kannadaevision.in) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡುವ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿಗೆ ಚನ್ನಮ್ಮ ಹಳ್ಳಿಕೇರಿ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿ ₹ 5 ಲಕ್ಷ ಮೊತ್ತವನ್ನು ಒಳಗೊಂಡಿದೆ. ಅ. 2 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಹಾವೇರಿ ಜಿಲ್ಲೆ ಹೊಸರಿತ್ತಿಯಲ್ಲಿ 1931ರಲ್ಲಿ ಜನಿಸಿದ ಚನ್ನಮ್ಮ ಅವರು, ಮಹಾತ್ಮಗಾಂಧಿಯವರ ಆದರ್ಶವನ್ನು ಅನುಸರಿಸುತ್ತಾ ಬಂದಿದ್ದಾರೆ. ಸ್ವಾತಂತ್ರ್ಯ ಹೋರಾಟದ ಕೇಂದ್ರವಾಗಿದ್ದ ಹೊಸರಿತ್ತಿಯಲ್ಲಿ ತಮ್ಮ ತಾತ ಗುದ್ಲಪ್ಪ ಹಳ್ಳಿಕೇರಿ ಸ್ಥಾಪಿಸಿದ್ದ ಗಾಂಧಿ ಆಶ್ರಮದೊಂದಿಗೆ ಒಡನಾಟ ಇಟ್ಟುಕೊಂಡು ಬೆಳೆದವರು.
key word: chennamma-hallikeri-prize-reciving
No comments:
Post a Comment