ಆನೇಕಲ್:(kannadaevision.in)ತಮಿಳುನಾಡಿಗೆ ಅಕ್ಟೋಬರ್ 1ರಿಂದ 6ರವರೆಗೆ ಆರು ಸಾವಿರ ಕ್ಯುಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಕಾರಣ ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಗಡಿಯಲ್ಲಿ ಭದ್ರತೆಯನ್ನು ಪೊಲೀಸರು ಬಿಗಿಗೊಳಿಸಿದ್ದಾರೆ. ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಮೀಸಲು ಪಡೆ ಹಾಗೂ ಕ್ಷಿಪ್ರ ಕಾರ್ಯ ಪಡೆ ಗಡಿಯಲ್ಲಿ ಬೀಡು ಬಿಟ್ಟಿದೆ. ಡಿವೈಎಸ್ಪಿ ಎಸ್.ಕೆ.ಉಮೇಶ್ ಅವರ ನೇತೃತ್ವದಲ್ಲಿ ತಮ್ಮನ್ನು ಭದ್ರತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ಮತ್ತು ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ಸುಗಳು ತಮ್ಮ ರಾಜ್ಯಗಳ ಗಡಿಭಾಗದವರೆಗೆ ಸಂಚರಿಸಿ ಪ್ರಯಾಣಿಕರನ್ನು ಇಳಿಸಿದ ನಂತರ ಪ್ರಯಾಣಿಕರ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತಿದ್ದಾರೆ.
keyword: bangalore-kaveri-water-prblm
No comments:
Post a Comment