Showing posts with label Bengaluru news. Show all posts
Showing posts with label Bengaluru news. Show all posts

Tuesday, October 4, 2016

ದಸರಾ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ ಸೌಲಭ್ಯ ಪ್ರವಾಸಿಗರಿಗೆ ವಿಶೇಷ ಸಾರಿಗೆ

ಬೆಂಗಳೂರು: (kannadaevision.in)ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರಿಗೆ ಹೆಚ್ಚುವರಿ ಬಸ್ಸುಗಳನ್ನು ಒಳಗೊಂಡ  ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್‌ 7ರಿಂದ 10ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 1500ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.


ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರ್ಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಮಧುರೈ, ತಿರುಚಿ, ಪಣಜಿ, ಶಿರಡಿ, ಮುಂಬೈ, ಎರ್ನಾಕುಲಂ, ಪಾಲ್ಗಾಟ್, ತಿರುವನಂತಪುರ ಸ್ಥಳಗಳಿಗೆ ವಿಶೇಷ ಬಸ್ಸುಗಳು ಸಂಚರಿಸುತ್ತವೆ.


ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ನೀಡಲಾಗುವುದು.


ಸಂಚಾರ ಮಾಡುವ ಹೆಚ್ಚುವರಿ ಬಸ್‌ಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮೈಸೂರು ಸುತ್ತಾಟಕ್ಕೆ ‘ದರ್ಶಿನಿ’
ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಒದಗಿಸಿರುವ ವಿಶೇಷ ಬಸ್‌ಗಳ ವ್ಯವಸ್ಥೆ ಹೀಗಿದೆ. 

ಗಿರಿದರ್ಶಿನಿ:  ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಕ್ಕೆ ಪ್ರಯಾಣ ದರ ವಯಸ್ಕರಿಗೆ ₹350, ಮಕ್ಕಳಿಗೆ ₹175 ದರ ನಿಗದಿಪಡಿಸಲಾಗಿದೆ.


ಜಲದರ್ಶಿನಿ:  ಗೋಲ್ಡನ್‌ಟೆಂಪಲ್ (ಬೈಲಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಹಾಗೂ ಕೆ.ಆರ್.ಎಸ್.ಗೆ ಪ್ರಯಾಣ ದರ ವಯಸ್ಕರಿಗೆ ₹375 ಮತ್ತು ಮಕ್ಕಳಿಗೆ ₹190 ದರ ನಿಗದಿಪಡಿಸಲಾಗಿದೆ.


ದೇವದರ್ಶಿನಿ: ನಂಜನಗೂಡು, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣದರ ವಯಸ್ಕರಿಗೆ ₹275, ಮಕ್ಕಳಿಗೆ ₹140 ದರವನ್ನು ನಿಗದಿಪಡಿಸಲಾಗಿದೆ. ಈ ಬಸ್ಸುಗಳು ಬೆಳಿಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗುತ್ತವೆ.
keyword: mysore-dasara-special-bus-service

Monday, October 3, 2016

ದಸರಾ ಪ್ರತಿಕೃತಿಗಳೊಂದಿಗೆ ಸೆಲ್ಫಿಗೆೆ ವಿದೇಶಿ ಪ್ರಯಾಣಿಕರು ದುಂಬಾಲು ವಿಮಾನ ನಿಲ್ದಾಣದಲ್ಲಿ ದಸರಾ ಸಾಂಸ್ಕೃತಿಕ ಮೆರಗು



ದೇವನಹಳ್ಳಿ :(kannadaevision.in) ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವ ಭೂಪಟದಲ್ಲಿ ಗುರುತಿಸಿಕೊಂಡ ನಂತರ ಪ್ರತಿ ವರ್ಷ ನಾಡಿನ ಸಾಂಸ್ಕೃತಿಕ ಪರಂಪರೆಯೊಂದಿಗೆ ದಸರಾ ಉತ್ಸವಕ್ಕೆ ಈ ಬಾರಿ ಅದ್ದೂರಿಯಾಗಿ ಚಾಲನೆ ನೀಡಿದೆ.

ರಾಜ್ಯದೆಲ್ಲೆಡೆ ದಸರಾ ನಾಡ ಹಬ್ಬಕ್ಕೆ ಮೈಸೂರು ಸೇರಿದಂತೆ ವಿವಿಧೆಡೆ ಚಾಲನೆಯಾಗುತ್ತಿದೆ. 9 ದಿನಗಳ ಸಂಭ್ರಮದಲ್ಲಿ ಬೆಂಗಳೂರು ಮೈಸೂರು ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಲು ಬಂದು ಹೋಗುತ್ತಿರುವ ವಿದೇಶಿಯರಿಗೆ ದಸರಾ ಹಬ್ಬದ ಸ್ವಾಗತ ನೀಡಲು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ.

ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಐಎಎಲ್ ಸಂಸ್ಥೆ ನಾಡಿನ ಇತಿಹಾಸ ಪರಂಪರೆ ಸಾರುವ ಸ್ಮಾರಕ, ಜನಪದ ನೃತ್ಯ ಪ್ರಕಾರಗಳ ಭಿತ್ತಿಚಿತ್ರಗಳಿಗೆ ದೀಪಾಲಂಕಾರ, ಲೇಸರ್‌ ಶೋ, ಅಳವಡಿಸಿದೆ. ಆ ಮೂಲಕ ದೇಶ, ವಿದೇಶಿಯರಿಗೆ ರೋಮಾಂಚನಗೊಳಿಸುತ್ತದೆ. ಇದನ್ನು ನೋಡಿದ ವಿದೇಶಿ ಪ್ರಯಾಣಿಕರು ನೃತ್ಯ ತಂಡದೊಂದಿಗೆ ಸೆಲ್ಫಿ ಛಾಯಾಚಿತ್ರಕ್ಕೆ ದುಂಬಾಲು ಬೀಳುತ್ತಿದ್ದಾರೆ.

ಎರಡು ಬಾರಿ ದೇಶದಲ್ಲೆ ಅತ್ಯುತ್ತಮ ಹಸಿರೀಕರಣ ವಿಮಾನ ನಿಲ್ದಾಣ ಪುರಸ್ಕಾರಕ್ಕೆ ಪಾತ್ರವಾಗಿರುವ ವಿಮಾನ ನಿಲ್ದಾಣ ಆವರಣದಲ್ಲಿ ಆನೆಯ ಮೇಲೆ ಅಂಬಾರಿ, ಮೈಸೂರು ಅರಮನೆಯಂತೆ  ಕಂಗೊಳಿಸುವಂತೆ ಮಾಡಿರುವ ವಿದ್ಯುತ್ ದೀಪಗಳ ಅಲಂಕಾರಗಳು ಎದ್ದು ಕಾಣುತ್ತಿವೆ.

ದತ್ತಣ್ಣ ಚಾಲನೆ:  ಚಿತ್ರನಟ ದತ್ತಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ಜಿಲ್ಲಾಧಿಕಾರಿ ಪಾಲಯ್ಯ, ಕೆಐಎಎಲ್ ಸಂಸ್ಥೆ ನಿರ್ದೇಶಕ ಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Keyword: dasara-celebration-airport

Wednesday, September 28, 2016

ನೀರು ಬಿಟ್ಟರೆ ಸರ್ಕಾರದ ವಿರುದ್ಧ ಹೋರಾಟ; ಸಂಘಟನೆಗಳ ಎಚ್ಚರಿಕೆ


ಬೆಂಗಳೂರು: (kannadaevision.in)ಸುಪ್ರೀಂಕೋರ್ಟ್‌ ಮತ್ತೆ ಮೂರು ದಿನ ನೀರು ಹರಿಸುವಂತೆ ನೀಡಿದ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು, ಸರ್ಕಾರ ಸದನದಲ್ಲಿ ತೆಗೆದುಕೊಂಡ ತೀರ್ಮಾನಕ್ಕೆ ಬದ್ಧವಾಗಿದ್ದರೆ ಸರ್ಕಾರದ ಬೆಂಬಲಕ್ಕೆ ತಾವು ನಿಲ್ಲುವುದಾಗಿ ಅಭಯ ನೀಡಿವೆ.
ಪ್ರತಿಭಟನೆ, ಮುಷ್ಕರ, ಬಂದ್‌ ಸೇರಿದಂತೆ ಎಲ್ಲ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ಅಂತಿಮವಾಗಿ ಸದನದಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಗಿದೆ. ಅದಕ್ಕೆ ಸರ್ಕಾರ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನೀರು ಹರಿಸಬಾರದು.
ತೀರ್ಪಿಗೆ ಮಣಿದು ನೀರು ಹರಿಸಿದರೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪು ಹೊರಬಿದ್ದ ಬೆನ್ನಲ್ಲೇ ಕರ್ನಾಟಕ ರಕ್ಷಣಾ
ವೇದಿಕೆ (ಪ್ರವೀಣ್‌ಶೆಟ್ಟಿ ಬಣ), ಕನ್ನಡ ಚಳವಳಿ ವಾಟಾಳ್‌ ಪಕ್ಷ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು
ಮಂಗಳವಾರ ಸಂಜೆ ಸಭೆ ನಡೆಸಿದವು.

"ಸದ್ಯದ ಸ್ಥಿತಿಯಲ್ಲಿ ನಮಗೆ ಕುಡಿಯುವ ನೀರು ಮುಖ್ಯವೇ ಹೊರತು, ಆದೇಶ ಪಾಲನೆ ಅಲ್ಲ. ಆದ್ದರಿಂದ ಸರ್ಕಾರ
ತನ್ನ ನಿಲುವಿಗೆ ಬದ್ಧವಾಗಿರಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧವೂ ನಿಲ್ಲಬೇಕಾಗುತ್ತದೆ. ಒಟ್ಟಾರೆ ಸರ್ಕಾರದ
ಸರ್ವಪಕ್ಷ ಸಭೆ ನಂತರ ಮುಂದಿನ ನಡೆ ಬಗ್ಗೆ ತೀರ್ಮಾನಿಸಲಾಗುವುದು' ಎಂದು ಕರವೇ ಮುಖಂಡ ಪ್ರವೀಣ್‌
ಶೆಟ್ಟಿ ತಿಳಿಸಿದರು.

ರೈತರ ಬೆಂಬಲಕ್ಕೆ ಕಸಾಪ: "ಕನ್ನಡ ಸಾಹಿತ್ಯ ಪರಿಷತ್ತು ಯಾವತ್ತಿದ್ದರೂ ರೈತರ ಬೆಂಬಲಕ್ಕೆ ಇರುತ್ತದೆ. ರೈತರ ಪರ
ಸರ್ಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಬೆಂಬಲ ಇದೆ. ಮುಂದಿನ ಕನ್ನಡದ ನೆಲ-ಜಲ ರಕ್ಷಣೆಗೆ ಸಂಬಂಧಿಸಿದ ಹೋರಾಟಕ್ಕೆ ಬದ್ಧವಾಗಿರುತ್ತೇವೆ' ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಸ್ಪಷ್ಟಪಡಿಸಿದ್ದಾರೆ.

ನೀರು ಬಿಟ್ಟರೆ ಜನರಿಗೆ ದ್ರೋಹ:
ಒಂದು ಕ್ಯುಸೆಕ್‌ ನೀರನ್ನೂ ಬಿಡಲು ಸಾಧ್ಯವಿಲ್ಲದ ಸಂಕಷ್ಟದ ಪರಿಸ್ಥಿತಿಯಲ್ಲಿ ಕರ್ನಾಟಕ ಇದೆ. ಇದೇ ಕಾರಣಕ್ಕೆ
ಸದನದಲ್ಲಿ ಕಾವೇರಿ ಕುಡಿಯಲು ಮಾತ್ರ ಬಳಸಬೇಕು ಎಂಬ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ನೀರು ಬಿಡದೆಯೇ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಕೊಡಬೇಕು. ನಿರ್ಣಯ ಮೀರಿ ನೀರು ಬಿಟ್ಟರೆ ಸರ್ಕಾರ ರಾಜ್ಯದ ಜನರಿಗೆ ದ್ರೋಹ ಮಾಡಿದಂತಾಗುತ್ತದೆ. ನೀರು ಹರಿಸಿದರೆ ಮತ್ತೆ ಬೀದಿಗಿಳಿಯಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ
ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಸಿದ್ದಾರೆ.

ಪ್ರಧಾನಿ ಮೌನ ಖಂಡನೀಯ- ವಾಟಾಳ್‌: "ನಾವೇನೂ ನೀರನ್ನು ಜಲಾಶಯಗಳಲ್ಲಿ ಕದ್ದು ಇಟ್ಟುಕೊಂಡಿಲ್ಲ. ಎಲ್ಲವೂ ಮುಕ್ತವಾಗಿದೆ. ಪರಿಸ್ಥಿತಿಯನ್ನು ನೋಡಿಯೂ ಈ ರೀತಿ ಆದೇಶ ಒಳ್ಳೆಯದಲ್ಲ. ಈ ಮಧ್ಯೆ ಪ್ರಧಾನಿ ಮೌನ ವಹಿಸಿರುವುದು ಖಂಡನೀಯ. ಎಲ್ಲ ರಾಜ್ಯಗಳನ್ನೂ ಸಮನಾಗಿ ನೋಡಬೇಕಾದ ಪ್ರಧಾನಿ, ಸಮಸ್ಯೆ ಬಂದಾಗ ಬಗೆಹರಿಸುವ ಪ್ರಯತ್ನ ಮಾಡಬೇಕು. ಬುಧವಾರ ನಡೆಯುವ ಸರ್ವಪಕ್ಷ ಸಭೆಯ ತೀರ್ಮಾನದ ಬಳಿಕ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು' ಎಂದು ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.
key word: kaveri water revolution- bangalore-harthal